ಮೈಸೂರು: ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ಸೆ.28 ರ ಮಧ್ಯರಾತ್ರಿ 12 ಗಂಟೆಯಿಂದ ಸೆ.30ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಮಾಡಲಾಗಿದೆ.
ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2 ದಿನಗಳ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ನಗರದ ಟೌನ್ ಹಾಲ್ ನ ಒಳ ಆವರಣ ಹೊರತುಪಡಿಸಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರ ವ್ಯಾಪ್ತಿಯಲ್ಲಿ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ, ರಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧ ಹೇರಲಾಗಿದೆ.
ಮಹಿಷ ಮಂಡಲೋತ್ಸವದ ಆಚರಣೆಗೆ ತೀವ್ರ ಸ್ವರೂಪದ ವಿರೋಧವಿದ್ದು, ಈ ಹಿನ್ನೆಲೆಯಲ್ಲಿ ಪೋಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.