ಮಂಡ್ಯ, ಜ.14: ಬೆಂಗಳೂರು-ಮೈಸೂರು ಹೆದ್ದಾರಿಯ ಶಿಂಷಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್ನ ಮ್ಯಾನೇಜರ್ ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು. ಕಿಶೋರ್ ಎಂಬುವರಿಗೆ ಗಾಯವಾಗಿದ್ದು, ಮಂಡ್ಯ ಮಿಮ್ಸ್ಗೆ ದಾಖಲಿಸಲಾಗಿದೆ. ಬ್ಯಾಂಕ್ ಸಿಬ್ಬಂದಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಶಿಂಷಾ ನದಿ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದೆ. ಮದ್ದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.