ಪ್ರತಿನಿಧಿ ವರದಿ ಮಂಡ್ಯ
ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮಂಡ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಡ್ಯ, ಸೆಂಟ್ ಜಾನ್ ಆಂಬುಲೆನ್ಸ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ 27ನೇ ವರ್ಷದ ಜಿಲ್ಲಾ ಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ನಟ ಶಂಕರ ಅಶ್ವಥ್ ಗಾಳಿಪಟ ಹಾರಿಸುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಭಾರತ ಸೇವಾದಳದ ಅಧ್ಯಕ್ಷರಾದ ಬಿ.ಸಿ.ಶಿವಾನಂದ್ ವಹಿಸಿದ್ದರು. ಸಮೃದ್ಧಿ ಲಯನ್ಸ್ ಅಧ್ಯಕ್ಷ ನೀನಾ ಪಟೇಲ್, ಹಾಸ್ಯ ನಟ ರಮಾನಂದ್, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ವಿ.ನಾಗರಾಜು, ಎಸ್.ಪಿ.ನಾರಾಯಣ್ ಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.