ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ ಆವರಣದಲ್ಲಿ ಭಾನುವಾರ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್ ಮತ್ತು ರೋಟರಿ ಮಿಡ್-ಟೌನ್, ವಿಶ್ವಚೇತನ ವಿದ್ಯಾಸಂಸ್ಥೆ ಹಾಗೂ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಮತ್ತು ಮೈಸೂರಿನ ನಾರಾಯಣ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ 26ನೇ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 60 ಜನರು ಪಾಲ್ಗೊಂಡಿದ್ದರು.
ಶಿಬಿರದಲ್ಲಿ ಮೈಸೂರಿನ ನಾರಾಯಣ ಆಸ್ಪತ್ರೆ ವೈದ್ಯ ಡಾ.ಸಾರಿಕಾ, ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ಅಪರ್ಣ, ಸಂಯೋಜಕರಾದ ವಿಜಯ್ಕುಮಾರ್, ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯ ಸಂಯೋಜಕರಾದ ರಾಜೇಶ್, ಸಂಸ್ಥೆಯ ಸಿಬ್ಬಂದಿಗಳಾದ ಶಾಂತರಾಜು, ಕೆ.ಎಂ.ಅಕ್ಬರ್ ಇದ್ದರು. ಕಣ್ಣಿನ ತಪಾಷಣೆ ಬಳಿಕ 20 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
8ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ 26ನೇ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ವೈದ್ಯರು ಕಣ್ಣಿನ ತಪಾಸಣೆ ನಡೆಸಿದರು.