ಮೈಸೂರು: ಲಿಂಗಾಬುದಿ ಕೆರೆಯ ಜಲಚರಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ ತಜ್ಞರ ಜಂಟಿ ಸಮಿತಿ ರಚಿಸಲಾಗಿದೆ. ಕೆರೆಗೆ ಕೊಳಚೆ ನೀರು ಸೇರುತ್ತಿರುವುದಕ್ಕೆ ಕಾರಣ, ಮೀನುಗಳ ಸಾವಿಗೆ ಕಾರಣ ತಿಳಿದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಮೀನುಗಳ ಸಾವಿನ ನಿಖರ ಮಾಹಿತಿ ಕಲೆ ಹಾಕಲಿದೆ.