ಬೆಂಗಳೂರು ಸೆ.13: ಮತ್ತೆ 15 ದಿನ ನೀರು ಹರಿಸುವಂತೆ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು. ಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ ಎಂದು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.