ಕೋಲಾರ: ದೆಹಲಿ ನಾಯಕರ ಬೇಟಿ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದಿನಿಂದ ಲೋಕಸಭಾ ಚುನಾವಣೆಗೆ ರಣಕಹಳೆ ಊದಲಿದ್ದಾರೆ. ರಾಜಕೀಯ ನಾಯಕರ ಶಕ್ತಿಕೇಂದ್ರ ಕುರುಡುಮಲೆಯಿಂದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಬರಪರಿಸ್ಥಿತಿ, ಕಾವೇರಿ ನೀರುಹಂಚಿಕೆ ವಿಚಾರ, ಸೇರಿ ಹಲವು ವಿಚಾರಗಳೊಂದಿಗೆ ರಾಜ್ಯ ಪ್ರವಾಸಕ್ಕೆ ಪ್ಲಾನ್ ಮಾಡಲಾಗಿದೆ. ನಾಯಕರು ತಂಡ ತಂಡವಾಗಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ರಾಜ್ಯ ಪ್ರವಾಸಕ್ಕೂ ಮೊದಲು ಕುರುಡುಮಲೆ ವಿನಾಯಕನಿಗೆ ಪೂಜೆ ಸಲ್ಲಿಸಿದ ನಂತರ ಯಡಿಯೂರಪ್ಪ ಅವರು ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಇಂದು ಮಾಜಿ ಸಿಎಂ ಯಡಿಯೂರಪ್ಪ, ಸದಾನಂದಗೌಡ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಈಶ್ವರಪ್ಪ, ಸೇರಿದಂತೆ ಹಲವು ಬಿಜೆಪಿ ನಾಯಕರ ದಂಡು ಕುರುಡುಮಲೆಗೆ ಆಗಮಿಸಲಿದೆ.