ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್ಆರ್ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.