ರಾಷ್ಟ್ರೀಯ ವಿಚಾರಕ್ಕಾಗಿ ಕೆಲವೊಂದು ಸಾರಿ ಹೊಂದಾಣಿಕೆ ಮತ್ತು ಮೈತ್ರಿ ಅನಿವಾರ್ಯವಾಗುತ್ತದೆ. ಹೀಗಾಗಿ, ಜೆಡಿಎಸ್ನೊಂದಿಗೆ ಬಿಜೆಪಿ ಮನಪೂರ್ವಕ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಕೆಲವೊಮ್ಮೆ ಅನಿವಾರ್ಯತೆಗಳು ಸೃಷ್ಟಿಯಾಗುತ್ತವೆ. ಹೀಗಾಗಿ, ಅಂಥ ಸಂದರ್ಭದಲ್ಲಿ ರಾಷ್ಟ್ರೀಯತೆ ಗಮನದಲ್ಲಿಟ್ಟುಕೊಂಡು ಇಂತಹ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹೊಸದಾಗಿ ಏನೂ ಅಲ್ಲ. ಈ ಹಿಂದೆ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ಮಾಡಿದ್ದೇವೆ. ಅಷ್ಟಕ್ಕೂ ಜೆಡಿಎಸ್ ಕಡೆಗಣಿಸುವ ಪಕ್ಷ ಅಲ್ಲ. ರಾಜ್ಯದಲ್ಲಿ ಗಟ್ಟಿನೆಲೆ ಇದೆ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಶಕ್ತಿ ಗಟ್ಟಿಗೊಳಿಸಲು ರಾಷ್ಟ್ರೀಯ ನಾಯಕರು ಜೆಡಿಎಸ್ ನೊಂದಿಗೆ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದರು.