ರಾಜಸ್ಥಾನ: ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸವೆಂದರೆ ಮಸೂದೆಗೆ ತಿದ್ದುಪಡಿ ಮಾಡುವುದು ಎಂದು ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, 2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘ಮಹಿಳಾ ಮೀಸಲಾತಿ ಮಸೂದೆ’ಗೆ ತಿದ್ದುಪಡಿ ತರಲಾಗುವುದು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸವೇ ಅದು. ಈಗ ಮಸೂದೆ ಜಾರಿಗೆ ತರಲು ಯಾವುದೇ ಪ್ರಮುಖ ಕಾನೂನು ತೊಡಕುಗಳಿಲ್ಲ. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು 10 ವರ್ಷಗಳ ಕಾಲ ಮುಂದೂಡಿದೆ. ಹೀಗಾಗಿ ನಾವು ಮಹಿಳಾ ಮೀಸಲಾತಿಯನ್ನು ಶೀಘ್ರವೇ ಜಾರಿ ಬರುವಂತೆ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದರು