ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ಪೌರಕಾರ್ಮಿಕರ ನೂತನ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿ ಗೌರವ ಸಮರ್ಪಿಸಿ ಮಾತನಾಡಿದರು. ಪೌರ ಕಾರ್ಮಿಕರ ಶ್ರೋಯೋಭಿವೃದ್ಧಿಗೆ ಸಾರ್ವಜನಿಕರು ಮತ್ತು ಸಂಘ, ಸಂಸ್ಥೆಗಳು ಮನಸ್ಸು ಮಾಡಬೇಕಿದೆ ಎಂದರು. ಕಾರ್ಮಿಕರನ್ನು ಕೀಳಾಗಿ ಕಾಣಬೇಡಿ: ಪೌರ ಕಾರ್ಮಿಕರನ್ನು ಸಮಾಜ ಕೀಳಾಗಿ ಕಾಣಬಾರದು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡಬೇಕು. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೌಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ ಎಂದರು.