ಬೆಂಗಳೂರು: ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಬೆನ್ನಲ್ಲೇ ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ನಿಖಿಲ್ ಕುಮಾರಸ್ವಾಮಿ ಭೇಟಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿಖಿಲ್ಗೆ ಬಿಜೆಪಿ ಶಾಸಕ ಮುನಿರತ್ನ ಸಾಥ್ ನೀಡಿದ್ದರು. ದೆಹಲಿಯಲ್ಲಿ ನಡೆದ ಮಾತುಕತೆ ಬಗ್ಗೆ ನಿಖಿಲ್, ಬಿಎಸ್ವೈಗೆ ಮಾಹಿತಿ ನೀಡಿದರು. ಈ ನಡುವೆ ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಮಾತಾಡೋದಾಗಿ ಯಡಿಯೂರಪ್ಪ ಹೇಳಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಮಾಜಿ ಸಿಎಂ ಅವರನ್ನು ಭೇಟಿ ಮಾಡಿದ ನಿಖಿಲ್ ಅವರು, ತಂದೆಯ ಪರ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಜೊತೆಗಿನ ಮಾತುಕತೆ ವಿಷಯವನ್ನು ಬಿಎಸ್ವೈ ಅವರ ಗಮನಕ್ಕೆ ತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಎಸ್ವೈ ಭೇಟಿ ಬಳಿಕ ಮಾತನಾಡಿದ ನಿಖಿಲ್, ತಮಗೆ ಗೊತ್ತಿರುವಂತೆ ಜೆಡಿಎಸ್ ಬಿಜೆಪಿ ಜಂಟಿಯಾಗಿ ಚುನಾವಣೆ ಎದುರಿಸಬೇಕು ಅನ್ನೋದು ನಮ್ಮ ಉದ್ದೇಶ. ದೇವೇಗೌಡರು ತೆಗೆದುಕೊಂಡಿರೋ ಹಿತದೃಷ್ಟಿಯಿಂದ. ಕಾರ್ಯಕರ್ತನಾಗಿ ಆಶೀರ್ವಾದ ಪಡೆಯೋದು ನನ್ನ ಜವಾಬ್ದಾರಿ. ಸಿಎಂ ಆಗಿದ್ದಾಗ ಯಡಿಯೂರಪ್ಪ ಅವರ ಕಾರ್ಯಕ್ರಮ ಮನೆಮಾತಾಗಿದೆ. ಹಿರಿಯರ ಆಶೀರ್ವಾದ ಪಡೆಯೋದು ಒಂದು ಸಂಸ್ಕೃತಿ. ಹಾಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದರು.