ಕಾವೇರಿ ವಿಷಯದಲ್ಲಿ ಪ್ರಧಾನಿ ಮೋದಿ ಅವರು ಮೌನ ಸರಿಯಲ್ಲ. ನಾಲ್ಕೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಕೂಡಲೇ ಸಮಸ್ಯೆ ಪರಿಹರಿಸುವ ಕಾರ್ಯವನ್ನು ಅವರು ಮಾಡಬೇಕಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿನ ಹೊಸೂರು ಬಸ್ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏಕೆ ಹಿಂದೆ ಇಂಥ ಸಮಸ್ಯೆಗಳಾದಾಗ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಿಲ್ವಾ? ನಾಲ್ಕೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಒಂದು ಸಮರ್ಪಕವಾದ ನಿರ್ಣಯ ಕೈಗೊಳ್ಳಬಹುದು. ಅದ್ಯಾಕೆ ಪ್ರಧಾನಿಗಳು ಈ ವಿಷಯದಲ್ಲಿ ಮೌನ ವಹಿಸಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ರಾಜ್ಯದ ಸಂಸದರೂ ಈ ಕುರಿತು ಮಾತನಾಡುತ್ತಿಲ್ಲ. ಏಕೆ ಎಂಬುದನ್ನು ಅವರನ್ನೇ ಕೇಳಿ ಎಂದರು.