ಮಂಡ್ಯ: ಕಾವೇರಿ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಬಂದ್ ಬೆಂಬಲಿಸಿ ನಾಳೆ ಹೆದ್ದಾರಿ, ರೈಲು ತಡೆದು ಚಳವಳಿ ನಡೆಸಲಾಗುವುದು ಎಂದು ಮಂಡ್ಯದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದ್ದು, ಬೆಂ-ಮೈ ಎಕ್ಸ್ಪ್ರೆಸ್ ವೇ ಹಾಗೂ ರೈಲು ತಡೆಗೆ ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರ ಒಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವುಲ್ಲಿ ವಿಫಲವಾಗುತ್ತಿದ್ದು, ಖಡಕ್ ಆಗಿ ನೀರು ಬಿಡಲ್ಲ ಅನ್ನೋ ಸ್ಪಷ್ಟ ನಿರ್ಧಾರವನ್ನ ತಿಳಿಸಬೇಕು. ತಮಿಳುನಾಡಿಗೆ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗಿದೆ. ಕುಡಿಯಲು ಕರ್ನಾಟಕ ನೀರು ಕೇಳ್ತಿದೆ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ಪ್ರಾಧಿಕಾರದ ತಜ್ಞರ ಕಳುಹಿಸಿ ವಸ್ತು ಸ್ಥಿತಿಯನ್ನ ಪರಿಶೀಲನೆ ನಡೆಸಬೇಕು ಎಂದಿದ್ದಾರೆ.