ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಅರಮನೆ ಆಡಳಿತ ವತಿಯಿಂದ ಮಾವುತರು ಮತ್ತು ಕಾವಾಡಿಗರಿಗೆ ಅರಮನೆ ಆವರಣದಲ್ಲಿಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾವುತರಿಗೆ ಉಪಹಾರ ಬಡಿಸಿದರು. ಇನ್ನು ಡಾ. ಎಂ.ಎಸ್. ಸ್ವಾಮಿನಾಥನ್ ನಿಧನ ಹಿನ್ನೆಲೆ ಉಪಹಾರಕ್ಕೂ ಮುನ್ನ ಮೌನಾಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ. ಹರೀಶ್ ಗೌಡ, ವಿಧಾನ ಪರಿಷತ್ತು ಸದಸ್ಯರಾದ ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ ಡಿಸಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.