ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೆನ್ನು ಅವರಿಗೆ ಕಾಣುವುದಿಲ್ಲ, ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಎಂದು ಟಾಂಗ್ ಕೊಟ್ಟಿದ್ದಾರೆ.