ಕಾವೇರಿ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು 25 ಸಂಸದರು ರಾಜ್ಯದ ಜತೆಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಿಂದೆ, ಈಗ ಮತ್ತು ಮುಂದೆಯೂ ಕರ್ನಾಟಕದ ಜೊತೆಗಿದೆ. ರಾಜ್ಯದ 25 ಸಂಸದರು ಸಹ ರಾಜ್ಯದ ನೆಲ, ಜಲದ ಪರವಾಗಿದ್ದಾರೆ ಎಂದು ತಿಳಿಸಿದರು.