ನಂಜನಗೂಡು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ತನ್ನ ಜವಾಬ್ದಾರಿ ತೋರದಿರುವ ಪರಿಣಾಮವಾಗಿ ಇಂದು ರಾಜ್ಯಕ್ಕೆ ಕುಡಿಯುವ ನೀರಿಗೆ ಅಭಾವ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿಕಾರಿದರು. ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಜಲಾಶಯಗಳು ಭರ್ತಿಯಾಗಿಲ್ಲ. ಬರ ಪರಿಸ್ಥಿತಿ ಉಲ್ಬಣಗೊಳ್ಳುವ ಸಂದರ್ಭದಲ್ಲಿಯೇ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಎಚ್ಚರಗೊಳ್ಳಬೇಕಾಗಿತ್ತು. ಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿ ಹೋಗಿದ್ದ ರಾಜ್ಯ ಸರ್ಕಾರ ಮೈಮರೆತ ಫಲವಾಗಿ ಟ್ರಿಬ್ಯುನಲ್ ಪ್ರತಿಕೂಲ ಆದೇಶ ಹೊರಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.