ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಉತ್ತಮ ಆಡಳಿತ ನೀಡುತ್ತಿದೆ, ರಾಜ್ಯದಲ್ಲಿ ನಿಗದಿತ ವಾಡಿಕೆ ಮಳೆಯಾಗದೆ ಸಮರ್ಪಕವಾಗಿ ಬಿತ್ತನೆ ಕೆಲಸಗಳು ಆಗದೆ ಬರ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ವೀಕ್ಷಿಸಲು ಕೋಲಾರಕ್ಕೆ ಭೇಟಿ ನೀಡಿದ್ದೇನೆ ಎಂದು ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮುಂದೆ ಪಂಚಾಯಿತಿ ಮತ್ತು ಲೋಕಸಭಾ ಚುನಾವಣೆಗಳು ಬರಲಿವೆ. ಲೋಕಸಭಾ ಚುನಾವಣೆ ಡಿಸೆಂಬರ್ ಒಳಗೆ ಬಂದರೂ ಬರಬಹುದು, ಕೇಂದ್ರದಲ್ಲಿ ಈಗಿನ ಸರ್ಕಾರ ಬದಲಾವಣೆ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು. ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಮುರಳಿ ಇದ್ದರು.