ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ತಂಡ ಭೇಟಿ ನೀಡಿದೆ. ಸಂತ್ರಸ್ತರಾದ ಪ್ರಸನ್ನ, ಸುಶೀಲಾ, ನಂದಿನಿ, ಸುಚಿತ್ರಾ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ನಾಯಕರ ಬಳಿ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಮೆರವಣಿಗೆ ವೇಳೆ ನಮ್ಮ ಮನೆಗಳ ಮೇಲೆ ದಾಳಿ ಮಾಡಿದ್ದು ಏಕೆ? ಹೆಂಗಸರು, ಮಕ್ಕಳು ಬದುಕುವುದು ಹೇಗೆ, ನಮಗೆ ರಕ್ಷಣೆ ಬೇಕು. ಸರ್ಕಾರ ಸತ್ತು ಹೋಗಿದೆಯಾ ಎಂದು ಕಟೀಲ್ ಅವರನ್ನು ಪ್ರಸನ್ನ ಅವರು ಪ್ರಶ್ನೆ ಮಾಡಿದ್ದಾರೆ.