ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮೊದಲ ಬಾರಿಗೆ ಬಿಜೆಪಿ ಶಾಸಕರಿಂದ ಅಸಾಧಾನ ವ್ಯಕ್ತವಾಗಿತ್ತಿದೆ. ಕಳೆದ 20 ವರ್ಷಗಳಿಂದ ಅವರಿಗೆ ವಿರೋಧವಾಗಿ ಕೆಲಸ ಮಾಡುತ್ತಾ ಬಂದಿರುವ ನಮಗೆ ಮೈತ್ರಿಯಿಂದ ಅಸಮಾಧಾನ ಉಂಟಾಗಿದ್ದು, ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ವಯಕ್ತಿಕವಾಗಿ 20 ವರ್ಷದಿಂದ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಕಾಂಗ್ರೆಸ್ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಇದೆ. ಯಾವತ್ತೂ ಕೂಡ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಮಾನಸಿಕ ಕಿರುಕುಳ ಹತ್ತಿರದಿಂದ ನೋಡಿದ್ದೇನೆ. ಮೈತ್ರಿ ವಿಚಾರ ನನಗೂ ವಯಕ್ತಿಕವಾಗಿ ಅಸಮಾಧಾನ ಇದೆ. ವಯಕ್ತಿಕ ವಾಗಿ ಮೈತ್ರಿ ಬಗ್ಗೆ ವಿರೋಧ ಇದೆ. ಮಾನಸಿಕವಾಗಿ ಕಿರಿಕುಳ ಇದೆ ಎಂದು ಹೇಳಿದ್ದಾರೆ.