ಮಂಗಳೂರು, ಅ.13: ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಹಬ್ಬದ ಮೆರವಣಿಗಳಲ್ಲಿ ದೈವದ ಕೋಲ ದೃಶ್ಯರೂಪಕ ಮಾಡಿ ವಿವಾದಕ್ಕೆ ಒಳಲಾಗುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ಹಬ್ಬದಂದು ಸಾರ್ವಜನಿಕವಾಗಿ ಹೋಗುವ ಮರೆವಣಿಗಳಲ್ಲಿ ದೈವದ ಕೋಲ ದೃಶ್ಯರೂಪಕ ಟ್ಯಾಬ್ಲೋಗಳನ್ನು ಬಳಸದಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಿತಿಯು ತಿಳಿಸಿದೆ. ಅನೇಕ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಮಿತಿಯು ಮಂಗಳೂರು ದಸರಾದ ಮೆರವಣಿಗಳಲ್ಲಿ ತುಳುನಾಡಿನ ದೈವಗಳ ದೃಶ್ಯರೂಪಕ ಟ್ಯಾಬ್ಲೋಗಳನ್ನು ಪ್ರದರ್ಶಿಸಿದಂತೆ ತಿರ್ಮಾನಿಸಿದೆ.
ಕುದ್ರೋಳಿ ಗೋಕರ್ಣನಾಥ 34ನೇ ವರ್ಷದ ದಸರಾ ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದೆ. 9 ದಿನಗಳ ನವರಾತ್ರಿ ಉತ್ಸವ ಅಕ್ಟೋಬರ್ 15ರಿಂದ ಆರಂಭವಾಗಲಿದ್ದು, ಅಕ್ಟೋಬರ್ 24ಕ್ಕೆ ದಸರಾಕ್ಕೆ ತೆರೆಬೀಳಲಿದೆ. ಈ ದಿನದಂದು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಯಾತ್ರೆಯಲ್ಲಿ ಬೇರೆ ಬೇರೆ ಸಂಘಟನೆಗಳ ಟ್ಯಾಬ್ಲೋಗಳ ಪ್ರದರ್ಶನಗೊಳ್ಳಲಿದೆ.
ಇನ್ನು ದಕ್ಷಿಣ ಕನ್ನಡದ ಅನೇಕ ಕಡೆ ದೈವದ ಕೋಲದ ರೂಪಕಗಳು ಪ್ರದರ್ಶನಗೊಳ್ಳುತ್ತಿದೆ. ಇನ್ನು ಮುಂದೆ ಇದು ನಡೆಬಾರದು ಹಾಗೂ ಈ ಬಾರಿ ದಸರಾದಲ್ಲೂ ಇದಕ್ಕೆ ಅವಕಾಶ ನೀಡಬಾರದು ಎಂದು ದೂರು ಬಂದಿದೆ ಎಂದು ದೇವಸ್ಥಾನ ಸಮಿತಿ ಕೋಶಾಧಿಕಾರಿ ಆರ್.ಪದ್ಮರಾಜ್ ತಿಳಿಸಿದ್ದಾರೆ.