ದುರ್ಗೆಯರ ಶಕ್ತಿಹೊಂದಿರುವ ನಾಡದೇವತೆ ಚಾಮುಂಡೇಶ್ವರಿ. ಇಂದು ಎಲ್ಲರೂ ಭಕ್ತಯಿಂದ ಪೂಜಾ ಕೆಲಸವನ್ನ ನೆರವೇರಿಸಿದ್ದೇವೆ. ಕನ್ನಡ ನಾಡಿಗೆ ಬೀಕರ ಬರಗಾಲ ಬಂದಿದೆ. ತಾಯಿ ಚಾಮುಂಡೇಶ್ವರಿ ಮಳೆಗೆ ಆಶೀರ್ವಾದ ಮಾಡಬೇಕು. ನಮ್ಮಲ್ಲೂ ರಾಕ್ಷಸ ಗುಣಗಳಿವೆ, ಈ ರಾಕ್ಷಸ ಗುಣಗಳನ್ನ ಬಿಟ್ಟು ಎಲ್ಲರೂ ಮುಂದೆ ಸಾಗಬೇಕು. ಎಲ್ಲರೂ ದ್ವೇಷ, ಅಸೂಯೆ ಬಿಟ್ಟು ಅಭಿವೃದ್ಧಿ ಕಡೆ ಹೆಜ್ಜೆ ಹಾಕಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮೈಸೂರಿನ ದಸರಾ ವೀಕ್ಷಣೆಗೆ ಹಲವು ಕಡೆಯಿಂದ ಜನ ಬರ್ತಾರೆ. ಈ ಅದ್ದೂರಿ ವೈಭೋಗವನ್ನ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಇರೋದ್ರಿಂದ ಹೆಚ್ಚಿನ ಜನ ಆಗಮಿಸುವ ನಿರೀಕ್ಷೆ ಇದೆ. ತಾಯಿ ಚಾಮುಂಡೇಶ್ವರಿ ಆಶಿರ್ವಾದದಿಂದ ರಾಜ್ಯದಲ್ಲಿ ಮಳೆ ಆಗಲಿ. ಎಲ್ಲರಿಗೂ ಚಾಮುಂಡೇಶ್ವರಿ ಒಳ್ಖೆಯದನ್ನ ಮಾಡಲಿ ಎಂದು ಜಿ.ಟಿ.ದೇವೇಗೌಡ ತಿಳಿಸಿದರು