ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2023 ಮೂರನೇ ದಿನವಾದ ಇಂದು ಮಕ್ಕಳಿಗೆ ಲಲಿತಕಲೆ ಹಾಗೂ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಸಚಿವ ಡಾ.ಹೆಚ್ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಕಾವ್ಯ ಸಂಭ್ರಮ, ಹಾಸ್ಯ ಚುಟುಕು ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸಾಹಿತಿ ಜಯಂತ್ ಕಾಯ್ಕಿಣಿ ಚಾಲನೆ ನೀಡಲಿದ್ದಾರೆ.