ಬೆಂಗಳೂರು, ಅಕ್ಟೋಬರ್ 19: ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿ.ಎಂ.ಇಬ್ರಾಹಿಂ (CM Ibrahim) ವಾಗ್ದಾಳಿ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ವಿಸರ್ಜನೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚುನಾವಣಾ ಆಯೋಗದಲ್ಲಿ ನಿಮ್ಮ ನಿರ್ಧಾರ ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದಾರೆ.