ದಸರಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಶೇಷ ಗಿಫ್ಟ್ ನೀಡಲು ಮೈಸೂರಿನ ಕಲಾವಿದ ರಾಜೇಶ್ ಅವರು ವಿಶೇಷ ಗಿಫ್ಟ್ ರೆಡಿ ಮಾಡಿದ್ದಾರೆ. ಜಂಬೂಸವಾರಿ ದಿನ ನೀಡಲು ಪಂಚಲೋಹದ 3D ಭಾವಚಿತ್ರ ಸಿದ್ಧಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪುತ್ರ ರಾಕೇಶ್ ಭಾವಚಿತ್ರ, ಜೊತೆಗೆ ನ್ಯಾಯದೇವತೆಯ ಪಂಚಲೋಹದ ವಿಗ್ರಹ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಂದೆ ಕೆಂಪೇಗೌಡರ 3D ಭಾವಚಿತ್ರ ನೀಡಲು ಕಲಾವಿದ ಮುಂದಾಗಿದ್ದಾರೆ.