ನವದೆಹಲಿ/ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ, ಡಿವಿ ಸದಾನಂದಗೌಡ ಅವರು ವಿಪಕ್ಷ ನಾಯಕ ಸ್ಥಾನದ ವಿಚಾರವಾಗಿ ಕೆಲ ದಿನಗಳ ಹಿಂದೆ ಬಹಿರಂಗವಾಗಿ ಮಾತನಾಡಿದ್ದರು. ಈ ವಿಚಾರವಾಗಿ ಇಂದು ಜೆ.ಪಿ.ನಡ್ಡಾ ಮಾತುಕತೆ ನಡೆಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಗಲಾಟೆ ಸಂಬಂಧ ಸದಾನಂದಗೌಡ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸಲಾಗಿದೆ. ಹೀಗಾಗಿ ಡಿವಿ ಸದಾನಂದಗೌಡ ಶುಕ್ರವಾರದ ಬಳಿಕ ತಮಿಳುನಾಡಿಗೆ ತೆರಳಲಿದ್ದಾರೆ.