ಬಿಜೆಪಿಯವರು ತಮ್ಮ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡೋದಿಲ್ಲ ಎಂದು ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿರುವುದಕ್ಕೆ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಸಮೀಪ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಹಿಂದೆ ಬಿಜೆಪಿಯವರು ಮಾಡಿರೋದನ್ನ ಮತ್ತೆ ಮುಂದುವರಿಸಿದ್ದಾರೆ. ಇದನ್ನು ನಮ್ಮ ಪಕ್ಷದ ಹಲವು ಶಾಸಕರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ತಮ್ಮ ಕೈನಲ್ಲಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಳ್ಳೋಕೆ ಆಗ್ತಿಲ್ಲ. ನಾಲ್ಕು ವರ್ಷಗಳ ಕಾಲ ಸರಿಯಾದ ಆಡಳಿತ ಕೋಡೋಕೆ ಆಗಲಿಲ್ಲ. ಬಿಜೆಪಿಯವರನ್ನು ನಂಬಿ ಯಾರೂ ಯಾವ ಶಾಸಕರೂ ಹೋಗೋದಿಲ್ಲ. ಹಾಗೇನಾದರೂ ನಂಬಿ ಹೋದರೆ ಹೋದವರಿಗೆ ಮೂರು ನಾಮ ಗ್ಯಾರಂಟಿ ಎಂದು ವ್ಯಂಗ್ಯ ಮಾಡಿದರು.