ಕೇರಳದ ಕಲಮಸ್ಸೆರಿಯಲ್ಲಿ ಕ್ರೈಸ್ತರ ಸಮಾವೇಶದ ಮೇಲೆ ಸರಣಿ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಬ್ಬರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕಾಂಗ್ರೆಸ್, ಸಿಪಿಎಂನ ಓಲೈಕೆ ರಾಜಕಾರಣವೇ ಇದಕ್ಕೆ ಕಾರಣ ಎಂದು ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಸಿಪಿಎಂನ ಅತಿಯಾದ ಓಲೈಕೆ ರಾಜಕಾರಣಕ್ಕೆ ಇತರ ಎಲ್ಲಾ ಸಮುದಾಯಗಳ ಮುಗ್ದರು ಬೆಲೆತೆರಬೇಕಾಗುತ್ತದೆ. ಇತಿಹಾಸ ಇದನ್ನು ನಮಗೆ ತಿಳಿ ಹೇಳಿದೆ. ಕೇರಳವನ್ನು ಲವ್ ಜಿಹಾದ್ನ ನಾಡನ್ನಾಗಿಸಲು ಹಾಗೂ ದ್ವೇಷವನ್ನು ಹಬ್ಬಿಸಲು ಭಯೋತ್ಪಾದಕ ಹಮಾಸ್ ಸಂಘಟನೆಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್/ಸಿಪಿಎಂ/ಯು.ಪಿ.ಎ ಮೈತ್ರಿಕೂಟದ ಲಜ್ಜೆಗೆಟ್ಟ ತುಷ್ಟೀಕರಣದ ರಾಜಕಾರಣಕ್ಕೆ ನಾಚಿಕೆಯಾಗಬೇಕು. ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ, ಇದನ್ನು ಸಾಕು ಮಾಡಿ ಎಂದು ಎಕ್ಸ್ (ಈ ಹಿಂದಿನ ಟ್ವಿಟ್ಟರ್) ನಲ್ಲಿ ಟೀಕೆ ಮಾಡಿದ್ದಾರೆ.