ಜಾನಪದ ಕಲಾವಿದೆ ಮಂಗಳಮುಖಿ ನರಸಪ್ಪಾಗೆ ಒಲಿದ ರಾಜೋತ್ಸವ ಪ್ರಶಸ್ತಿ
ಬೀದರ್: ಮೇ 01 1985 ರಲ್ಲಿ ಜಿಲ್ಲೆಯ ಮಾಳೆಗಾಂವ ಗ್ರಾಮದಲ್ಲಿ ಜನಿಸಿರುವ ಜಾನಪದ ಕಲಾವಿದೆ ಮಂಗಳಮುಖಿ ನರಸಪ್ಪಾಗೆ ರಾಜೋತ್ಸವ ಪ್ರಶಸ್ತಿ ಒಲಿದಿದೆ. ನಾಲ್ಕು ದಶಕದಿಂದ ಜಾನಪದ ಕಲೆಯಲ್ಲಿ ತೊಡಗಿಸಿಕೊಂಡಿರುವ ನರಸಪ್ಪಾ ಅವರು ಭೂತೆರ ಕುಣಿತದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮನೆ ಮಾತಾಗಿದ್ದಾರೆ.
ಒಂದು ಸಂಸ್ಥೆ ಸೇರಿ ಬಾಗಲಕೋಟೆ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಬಾಗಲಕೋಟೆ: ಒಂದು ಸಂಸ್ಥೆ ಹಾಗೂ ಬಾಗಲಕೋಟೆ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ರಂಗಭೂಮಿ ಹಿರಿಯ ಕಲಾವಿದ ವಿಶ್ವನಾಥ ವಂಶಾಕೃತಮಠ, ತಯ್ಯಬ್ ಖಾನ್ ಇನಾಮದಾರ, ಕೃಷಿ ಪರಿಸರ ವಿಭಾಗದ ಶಿವರೆಡ್ಡಿ ವಾಸನ್ ಹಾಗೂ ಸ್ನೇಹರಂಗ ಹವ್ಯಾಸಿ ಕಲಾಸಂಸ್ಥೆಗೂ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
ಮಾಧ್ಯಮ ಕ್ಷೇತ್ರದ ನಾಲ್ವರಿಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ಬಾರಿ ಮಾಧ್ಯಮ ಕ್ಷೇತ್ರದ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ದಿನೇಶ್ ಅಮೀನ್ ಮಟ್ಟು, ಜವರಪ್ಪ, ಮಾಯಾ ಶರ್ಮ ಹಾಗೂ ರಘು ಭಂಡಾರಿ ಅವರಿಗೆ ಪ್ರಶಸ್ತಿ ಲಭಿಸಿದೆ.
ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಇನ್ನು ಹೊರನಾಡು/ ಹೊರದೇಶ ಕ್ಷೇತ್ರದಲ್ಲಿ ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ ಹಾಗೂ ಶಶಿಕರಣ್ ಶೆಟ್ಟಿ ಅವರಿಗೆ ದೊರೆತಿದೆ.
ವಿಜ್ಞಾನ/ ತಂತ್ರಜ್ಞಾನದಿಂದ ಇಬ್ಬರಿಗೆ, ನ್ಯಾಯಾಂಗ ಕ್ಷೇತ್ರದ ಓರ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೆಂಗಳೂರು: ವಿಜ್ಞಾನ/ ತಂತ್ರಜ್ಞಾನ ಕ್ಷೇತ್ರದಿಂದ ಎಸ್ ಸೋಮನಾಥನ್ ಶ್ರೀಧರ್ ಪನಿಕರ್ ಹಾಗೂ ಪ್ರೋ ಗೋಪಾಲನ್ ಜಗದೀಶ್ ಅವರಿಗೆ ದೊರೆತಿದೆ. ನ್ಯಾಯಾಂಗ ಕ್ಷೇತ್ರದಿಂದ ಚಿಕ್ಕಬಳ್ಳಾಪುರದ ವಿ.ಗೋಪಾಲಗೌಡ ಅವರಿಗೆ ಪ್ರಶಸ್ತಿ ಲಭಿಸಿದೆ. –
ಶಿಕ್ಷಣ, ಕ್ರೀಡಾ ಕ್ಷೇತ್ರದಿಂದ ತಲಾ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ರಾಯಚೂರಿನ ರಾಮಪ್ಪ, ಕೋಲಾರದ ಕೆ.ಚಂದ್ರಶೇಖರ್ ಹಾಗೂ ಮಂಡ್ಯದ ಕೆ.ಟಿ ಚಂದು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕ್ರೀಡಾ ಕ್ಷೇತ್ರದಿಂದ ಕೋಲಾರದ ಕು. ದಿವ್ಯಾ ಟಿ.ಎಸ್, ಬೆಂಗಳೂರಿನ ಅದಿತಿ ಅಶೋಕ್ ಹಾಗೂ ಧಾರವಾಡದ ಅಶೋಕ್ ಗದಿಗೆಪ್ಪ ಏಣಗಿ ಅವರಿಗೆ ದೊರೆತಿದೆ.
ಸಾಹಿತ್ಯ ಕ್ಷೇತ್ರದ 8 ಜನರಿಗೆ ದೊರಕಿದ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಸಾಹಿತ್ಯ ಕ್ಷೇತ್ರದ 8 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ಚಾಮರಾಜನಗರದ ಪ್ರೊ. ಸಿ.ನಾಗಣ್ಣ, ಹಾಸನದ ಸುಬ್ಬು ಹೊಲೆಯಾರ್, ಹಾವೇರಿಯ ಸತೀಶ್ ಕುಲಕರ್ಣಿ, ಕೋಲಾರದ ಲಕ್ಷ್ಮಿಪತಿ, ವಿಜಯಪುರದ ಪರಪ್ಪ ಗುರುಪಾದಪ್ಪ ಸಿದ್ದಾಪುರ, ಬೆಂಗಳೂರಿನ ಡಾ.ಕೆ.ಷರೀಫಾ, ಕೋಲಾರದ ಲಕ್ಷ್ಮಿಪತಿ ಹಾಗೂ ಬೆಂಗಳೂತರಿನ ಡಾ.ಕೆ.ಷರೀಫಾ ಅವರಿಗೆ ಪ್ರಶಸ್ತಿ ದೊರೆತಿದೆ.
ವೈದ್ಯಕೀಯ ಕ್ಷೇತ್ರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ
ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಡಾ.ಸಿ. ರಾಮಚಂದ್ರ ಹಾಗೂ ದಕ್ಷಿಣ ಕನ್ನಡದ ಡಾ.ಪ್ರಶಾಂತ್ ಅವರಿಗೆ ದೊರೆತಿದೆ.
ಆಡಳಿತ ಕ್ಷೇತ್ರದ ಓರ್ವರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ಬಾರಿ ಆಡಳಿತ ಕ್ಷೇತ್ರದ ಓರ್ವ ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಹೌದು, ತುಮಕೂರಿನ ಬಲರಾಮ್ ಎಂಬುವವರಿಗೆ ನೀಡಲಾಗಿದ್ದು, ಪ್ರಶಸ್ತಿ ವಿಜೇತರಿಗೆ 5 ಲಕ್ಷ ನಗದು, 25 ಗ್ರಾಂ ಗೋಲ್ಡ್ ಮೆಡಲ್ ಹಾಗೂ ಪ್ರಶಸ್ತಿ ನೀಡಲಾಗುತ್ತದೆ.
5 ಲಕ್ಷ ನಗದು, 25 ಗ್ರಾಂ ಗೋಲ್ಡ್ ಮೆಡಲ್ ಸೇರಿ ಪ್ರಶಸ್ತಿ; ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಈ ಬಾರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಇವರಿಗೆ 5 ಲಕ್ಷ ನಗದು, 25 ಗ್ರಾಂ ಗೋಲ್ಡ್ ಮೆಡಲ್ ಹಾಗೂ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ಬಾರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧಾರ ಮಾಡಲಾಗಿತ್ತು. ಅದರಂತೆ ಇದೀಗ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ಬಾರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧಾರ ಮಾಡಿತ್ತು. ಅದರಂತೆ 10 ಸಂಘ ಸಂಸ್ಥೆಗಳು ಸೇರಿ 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆಯಲಿದೆ. ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ‘ಹುಸೇನಾಬಿ ಬುಡೆನ್ ಸಾಬ್ ಸಿದ್ಧಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಚೌಡಮ್ಮ, ಹೆಚ್.ಕೆ.ಕಾರಮಂಚಪ್ಪ, ವಿಭೂತಿ ಗುಂಡಪ್ಪಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ ಹಾಗೂ ಜಿ.ನಾಗರಾಜುಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಚಲನಚಿತ್ರ ಕ್ಷೇತ್ರದಲ್ಲಿ ಇಬ್ಬರಿಗೆ ರಾಜ್ಯೊತ್ಸವ ಪ್ರಶಸ್ತಿ
ಬೆಂಗಳೂರು: ಚಲನಚಿತ್ರ ಕ್ಷೇತ್ರದಲ್ಲಿ ಇಬ್ಬರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಕಟವಾಗಿದೆ. ಡಿಂಗ್ರಿ ನಾಗರಾಜ್ ಮತ್ತು ಬಿ.ಜನಾರ್ಧನ್ (ಬ್ಯಾಂಕ್ ಜನಾರ್ಧನ್) ಅವರಿಗೆ ಪ್ರಶಸ್ತಿ ದೊರೆತಿದೆ.
ರಂಗಭೂಮಿ ಕ್ಷೇತ್ರದ ಆರು ಕಲಾವಿದರಿಗೆ ರಾಜ್ಯೊತ್ಸವ ಪ್ರಶಸ್ತಿ
ಬೆಂಗಳೂರು: ರಂಗಭೂಮಿ ಕ್ಷೇತ್ರದ ಆರು ಕಲಾವಿದರಿಗೆ ರಾಜ್ಯೊತ್ಸವ ಪ್ರಶಸ್ತಿ ನೀಡಲಾಗಿದ್ದು, ಎ.ಜಿ. ಚಿದಂಬರ ರಾವ್ ಜಂಬೆ ಪಿ. ಗಂಗಾಧರ ಸ್ವಾಮಿ, ಹೆಚ್.ಬಿ.ಸರೋಜಮ್ಮ, ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ ಹಾಗೂ ಪಿ.ತಿಪ್ಪೇಸ್ವಾಮಿ ಅವರಿಗೆ ನೀಡಲು ನಿರ್ಧರಿಸಿದೆ.
ಸಂಗೀತ ಕ್ಷೇತ್ರದ 4 ಸಾಧಕರಿಗೆ ರಾಜ್ಯೊತ್ಸವ ಪ್ರಶಸ್ತಿ
ಬೆಂಗಳೂರು: ಸಂಗೀತ ಕ್ಷೇತ್ರದ 4 ಸಾಧಕರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ‘ಡಾ.ನಯನ ಎಸ್.ಮೋರೆ, ಲೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಡಾ.ಎಸ್ ಬಾಳೇಶ ಭಜಂತ್ರಿ ಅವರಿಗೆ ಪ್ರಶಸ್ತಿ ದೊರೆತಿದೆ.
ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರದ ನಾಲ್ವರಿಗೆ ರಾಜ್ಯೊತ್ಸವ ಪ್ರಶಸ್ತಿ
ಬೆಂಗಳೂರು: ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರದ ನಾಲ್ವರಿಗೆ ರಾಜ್ಯೊತ್ಸವ ಪ್ರಶಸ್ತಿ ನೀಡಲಾಗಿದೆ. ಟಿ.ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್ ಮತ್ತು ಪಿ.ಗೌರಯ್ಯ ಅವರಿಗೆ ಪ್ರಶಸ್ತಿ ಲಭಿಸಿದೆ.
ಯಕ್ಷಗಾನ & ಬಯಲಾಟ ಕ್ಷೇತ್ರದ ನಾಲ್ವರಿಗೆ ಲಭಿಸಿದ ರಾಜ್ಯೊತ್ಸವ ಪ್ರಶಸ್ತಿ
ಬೆಂಗಳೂರು: ಯಕ್ಷಗಾನ ಮತ್ತು ಬಯಲಾಟ ಕ್ಷೇತ್ರದ ನಾಲ್ವರಿಗೆ ರಾಜ್ಯೊತ್ಸವ ಪ್ರಶಸ್ತಿ ಲಭಿಸಿದೆ. ಅರ್ಗೋಡು ಮೋಹನದಾಸ ಶೆಣೈ, ಕೆ.ಲೀಲಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ ಹಾಗೂ ದಳವಾಯಿ ಸಿದ್ದಪ್ಪ ಅವರಿಗೆ ಲಭಿಸಿದೆ.