ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ಜಿಲ್ಲೆಯ ಒಂದಷ್ಟು ಸಮಸ್ಯೆ ಇದೆ, ಬಗೆಹರಿಸಿಕೊಳ್ಳುತ್ತೇವೆ. ರಾಜಕೀಯವಾಗಿ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಸ್ಯೆ ಇದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಬೆಳಗಾವಿಯಲ್ಲಿ ಸಮಸ್ಯೆ ಇತ್ತು. ಈಗಲೂ ಸಮಸ್ಯೆ ಇದ್ದೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಹೇಳಿದರು.