ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸವಾಗಿದೆ. ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದುತ್ತಿದ್ದರೂ ಕಡ್ಡಾಯವಾಗಿ ಕನ್ನಡವನ್ನು ಓದಲೇಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವ ದೃಷ್ಠಿಯಿಂದ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಬಾರಿ 42 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 13 ಸಾವಿರ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.