ಪ್ರತಿನಿಧಿ ವರದಿ ಕೊಳ್ಳೇಗಾಲ
ಸರ್ಕಾರಿ ನೌಕರರ ಸಭಾಂಗಣದಲ್ಲಿ ಶನಿವಾರ ಬೆ.10.30 ಗಂಟೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ -2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟ, ಕೊಳ್ಳೇಗಾಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ ಸಪ್ತಾಹ ಕಾರ್ಯಕ್ರಮವನ್ನು ಕೆಎಂಎಫ್ ನಿರ್ದೇಶಕ ಎಂ.ನಂಜುಂಡಸ್ವಾಮಿ ಉದ್ಘಾಟಿಸಲಿದ್ದಾರೆ.
ಚಾಮುಲ್ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಚಾಮುಲ್ ನಿರ್ದೇಶಕ ಎಸ್.ಮಹದೇವಸ್ವಾಮಿ, ಸಾಹುಲ್ ಅಹಮದ್, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ರಾಯಪ್ಪನ್, ನಿರ್ದೇಶಕ ಪಿ.ಮಹದೇವಸ್ವಾಮಿ, ಜಯಶೀಲಾ, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಪಿ.ಸೋಮಶೇಖರ್, ಸಹಕಾರ ಸಂಘಗಳ ಉಪ ನಿಬಂಧಕರು ಜ್ಯೋತಿ ಅರಸ್, ಸಹಾಯಕ ನಿಬಂಧಕ ಎಂ.ಎಸ್.ದಯಾನಂದ, ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್, ಮೇಲ್ವಿಚಾರಕ ಯಾಮಣ್ಣ ಅವರು ಭಾಗವಹಿಸಲಿದ್ದಾರೆ.