ಚಿಕ್ಕಮಗಳೂರು: ಬೈರಾಪುರ ಬಳಿ ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದ ETF ಸಿಬ್ಬಂದಿ ಕಾರ್ತಿಕ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ನಿನ್ನೆ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾರ್ತಿಕ್ ಸಾವನ್ನಪ್ಪಿದ್ದರು. ಮೃತ ಕಾರ್ತಿಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.