‘’ಕಿಚ್ಚ ಸುದೀಪ್ ಅವರೇ.. ನೀವು ನಮಗೆ ಭರವಸೆ ನೀಡಿದ್ರಿ.. “ಬಿಗ್ ಬಾಸ್ ಮನೆ ಸುರಕ್ಷತೆಯ ಸ್ವರ್ಗ! ಏನೂ ತಪ್ಪಾಗುವುದಿಲ್ಲ! ಆದರೆ, ಪ್ರಸ್ತುತ ಸನ್ನಿವೇಶವು ಈ ನಂಬಿಕೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ” ಎಂದು ಸಂಗೀತಾ ಶೃಂಗೇರಿ ಅವರ ಸಹೋದರ ಸಂತೋಷ್ ಬಹಿರಂಗವಾಗಿ ತಮ್ಮ ಬೇಸರ ಹೊರಹಾಕಿದ್ದಾರೆ.
ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ‘ರಾಕ್ಷಸರು ವರ್ಸಸ್ ಗಂಧರ್ವರು’ ಟಾಸ್ಕ್ ನೀಡಲಾಗಿತ್ತು. ಇದರಲ್ಲಿ ಕೆಲವರು ಅಕ್ಷರಶಃ ರಾಕ್ಷಸರಂತೆಯೇ ವರ್ತಿಸಿದರು. ಅದರಲ್ಲೂ ‘ಚೇರ್ ಆಫ್ ಥಾರ್ನ್ಸ್’ ಚಟುವಟಿಕೆಯಲ್ಲಿ ವರ್ತೂರು ಸಂತೋಷ್, ವಿನಯ್ & ಟೀಮ್ ಜಿದ್ದಿಗೆ ಬಿದ್ದು, ವೈತಕ್ತಿಕ ಹಗೆ ಸಾಧಿಸಿರುವುದು ಅಸಮಾಧಾನ ತಂದಿದೆ ಎಂದಿದ್ದಾರೆ.
ಒಂದು ಕಾಲದಲ್ಲಿ ಕೌಟುಂಬಿಕ ಕಾರ್ಯಕ್ರಮವಾಗಿದ್ದ ಈ ಶೋ ಈಗ ಅನಿಯಂತ್ರಿತ ಆಕ್ರಮಣ ಮತ್ತು ಹಿಂಸೆಯ ಅಖಾಡವಾಗಿ ಮಾರ್ಪಟ್ಟಿರುವುದನ್ನು ನೋಡಿದರೆ ಹೃದಯ ಛಿದ್ರವಾಗುತ್ತದೆ. ಕುಟುಂಬಗಳು ಗಾಬರಿಗೊಂಡಿವೆ. ಪರದೆಯ ಮೇಲೆ ಇಂತಹ ಆಕ್ರಮಣಕಾರಿ, ಹಿಂಸೆಯ ನಡವಳಿಕೆಯನ್ನು ನಾವು ಒಟ್ಟಿಗೆ ಕುಳಿತು ಹೇಗೆ ವೀಕ್ಷಿಸಬಹುದು?’’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಸ್ಕ್ ವೇಳೆ ನಡೆದ ದಾಳಿಯಿಂದಾಗಿ ಸಂಗೀತಾ ಮತ್ತು ಡ್ರೋನ್ ಪ್ರತಾಪ್ ಆರೋಗ್ಯಕ್ಕೆ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸಂಗೀತಾ ಶೃಂಗೇರಿ ಅವರ ಸಹೋದರ ಸಂತೋಷ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಭರವಸೆ ನೀಡಿದ್ದ ಕಲರ್ಸ್ ಕನ್ನಡ ವಾಹಿನಿ ಹಾಗೂ ಕಿಚ್ಚ ಸುದೀಪ್ ಅವರಿಗೆ ಸಂಗೀತಾ ಅಣ್ಣ ಸಂತೋಷ್ ಕುಮಾರ್ ಖಡಕ್ ಪ್ರಶ್ನೆಗಳನ್ನ ಕೇಳಿದ್ದಾರೆ.