ಮೈಸೂರು: ಯುವಕರಿಗೆ ಪ್ರತಾಪ್ ಸಿಂಹ ಪಾಸ್ ನೀಡಿರುವ ವಿಚಾರ ಕುರಿತು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ವಿರುದ್ದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಮಹಾರಾಜ ಕಾಲೇಜು ಮೈದಾನದ ಬಳಿ ಪ್ರತಾಪ್ ಸಿಂಹ ಕೈಯಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದ ಭಾವಚಿತ್ರದ ಫ್ಲೆಕ್ಸ್ ಹಿಡಿದು ಪ್ರತಿಭಟಿಸಲಾಯಿತು. ಇದನ್ನು ಕಂಡು ಪಾಲಿಕೆ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸಲು ಮುಂದಾದರು. ಸಿಬ್ಬಂದಿ ಜತೆ ಹಿಂದುಳಿದ ಜಾಗೃತಿ ವೇದಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.