ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಕೊರೋನಾದಿಂದ ಎದುರಾಗಬಹುದಾದ ಸಂಕಷ್ಟವನ್ನು ನಿರ್ವಹಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ. ನಾನಾ ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿತರಿಗಾಗಿ ಬೆಡ್ಗಳನ್ನು ಮೀಸಲಿಡಲು ಆರೋಗ್ಯಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ನಡುವೆ, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮಗುವಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ನಲ್ಲೂರು ಗ್ರಾಮದಲ್ಲಿರುವ ಸ್ಪರ್ಶ ಮಕ್ಕಳಧಾಮದಲ್ಲಿ ಮಗುವಿನ ಕೊರೋನಾ ದೃಢಪಟ್ಟಿದೆ. ಮಗುವಿನಲ್ಲಿ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಹೀಗಾಗಿ, ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟಿದೆ. ಮಗುವನ್ನು ಐಸೋಲೇಷನ್ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ.
“ಮಗುವಿನಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆ ಮಕ್ಕಳಧಾಮದಲ್ಲಿದ್ದ ಎಲ್ಲ ಮಕ್ಕಳಿಗೂ ಕೊರೋನಾ ಪರೀಕ್ಷೆ ಮಾಡಲಾಗಿದೆ. ಸೋಂಕು ಕಂಡುಬಂದಿಲ್ಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ. ಮಕ್ಕಳಧಾಮಕ್ಕೆ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.