ತಿಪಟೂರು: ತೆಂಗು ಬೆಳೆಗಾರರ ಸಂಕಷ್ಟವನ್ನು ಅರ್ಥಮಾಡಿಕೊಂಡ ನರೇಂದ್ರ ಮೋದಿ ಅವರು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ರು.11750ರಿಂದ 12ಸಾವಿರಕ್ಕೆ ಹೆಚ್ಚಿಸಿ ಆದೆಶ ಹೊರಡಿಸಿದೆ. ಹಾಗಾಗಿ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್ಗೆ 1500 ರು. ಪ್ರೋತ್ಸಾಹ ಬೆಲೆಯನ್ನು ನೀಡಿರುವುದರಿಂದ ನಫೆಡ್ಗೆ ಮಾರಾಟ ಮಾಡುವ ರೈತರಿಗೆ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 13,500 ರು. ಬೆಲೆ ಸಿಗಲಿದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರದ ಸಚಿವರಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್ ಅಭಿನಂದನೆ ಸಲ್ಲಿಸಿದ್ದಾರೆ.