ಚಿಕ್ಕಮಗಳೂರು ಜ.02: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈದ್ಯರ ಕೊರತೆಯಿಂದ ಮೂರು ಮೃತದೇಹಗಳನ್ನ ಹೊತ್ತ ಆಂಬುಲೆನ್ಸ್ಗಳು ಇಡೀ ದಿನ ಆಸ್ಪತ್ರೆ ಕಾದಿರುವ ಘಟನೆ ನಡೆದಿದೆ. ನಿಜಕ್ಕೂ ಈ ಸ್ಟೋರಿ ನಾಗರೀಕ ಸಮಾಜ ಹಾಗೂ ಸರ್ಕಾರ ತಲೆತಗ್ಗಿಸುವಂತದ್ದು. ಇಂತಹಾ ಕರುಳುಹಿಂಡುವ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಆಸ್ಪತ್ರೆ. ಡಿಸೆಂಬರ್ 31ರ ರಾತ್ರಿ ಒಂದು ಅಪಘಾತ. ಓರ್ವ ಮಹಿಳೆ ಸಾವು. ಡಿಸೆಂಬರ್ 31ರ ಮಧ್ಯರಾತ್ರಿ ರೈಲಿಗೆ ಸಿಲುಕಿ ಎರಡು ಸಾವು. ಒಟ್ಟು ಮೂರು ಮೃತದೇಹಗಳು ಇಂದು ಬೆಳಗ್ಗೆ 8 ಗಂಟೆಗೆ ತಾಲೂಕು ಆಸ್ಪತ್ರೆಗೆ ಬಂದಿದ್ದವು. ಆದ್ರೆ, 3 ಮೃತದೇಹ ಹೊತ್ತ ಎರಡು ಆಂಬುಲೆನ್ಸ್ಗಳು ಇಡೀ ದಿನ ಆಸ್ಪತ್ರೆಯ ಶವಾಗಾರದ ಮುಂದೆ ಕಾದುನಿಂತಿವೆ.