ಬೆಂಗಳೂರು, ಜ.12: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸತತ ಮೂರನೇ ಬಾರಿ ಅಧಿಕಾರದ ಗದ್ದಗೆ ಏರುವುದನ್ನು ಐಎನ್ಡಿಐಎ ಮೈತ್ರಿಕೂಟದ ಮೂಲಕ ತಡೆಯಲು ಮುಂದಾಗಿರುವ ಕಾಂಗ್ರೆಸ್, ದಕ್ಷಿಣ ಭಾರತದ ಮೇಲೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ಲಾನ್ ಮಾಡಿಕೊಂಡಿದೆ. ಆದರೆ, ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.