ಮೈಸೂರು : ಐದು ವರ್ಷವೂ ಸಿದ್ದರಾಮಯ್ಯ ಸಿಎಂ ವಿಚಾರಕ್ಕೆ ಮೈಸೂರಿನಲ್ಲಿ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಯಾರು ಯಾವಾಗ ಸಿಎಂ ಆಗಬೇಕು, ಡಿಸಿಎಂ ಆಗಬೇಕು ಅಂತ ಹೈಕಮಾಂಡ್ ನಿರ್ಧರಿಸುತ್ತದೆ.ಆ ತೀರ್ಮಾನ ನಮ್ಮ ಕೈಯಲ್ಲಿ ಇರುವುದಿಲ್ಲ.ಈ ರೀತಿಯ ಚರ್ಚೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಈ ರೀತಿ ವಿಚಾರ ಹೇಳಿ ಚರ್ಚೆಗೆ ಅವಕಾಶ ಕೊಡಬೇಡಿ ಅಂತ ಅವರಿಗೆ ಸೂಚನೆ ನೀಡುವ ಸ್ಥಾನದಲ್ಲಿ ನಾನು ಇಲ್ಲ. ನನ್ನ ಮನವಿ, ಸಲಹೆ ಇಷ್ಟೆ. ಇಂತಹ ವಿಚಾರಕ್ಕಿಂತ ಜನರ ಅಭಿವೃದ್ಧಿ ವಿಚಾರ ಚರ್ಚೆ ಆಗಲಿ ಅಷ್ಟೆ ಎಂದು ಹೇಳಿದರು.