ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ , ರಾಮಲಲ್ಲಾ ಮೂರ್ತಿ ಉದ್ಘಾಟನೆಯಾದ ಹಿನ್ನೆಲೆ ಸಾರ್ವಜನಿಕರಿಗೆ ಸಿಹಿ ಹಂಚಿ ನಂತರ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಈ ದಿನ ನಮ್ಮಲ್ಲರಿಗೂ ಸುದಿನ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾಗಿದೆ. ಮುಂದೆ ಕಾಶಿ ಮಥುರಾದಲ್ಲಿ ದೇವಾಲಯ ನಿರ್ಮಾಣವಾಗಲಿದೆ ಎಂದರು.