ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ತನಿಖಾ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು.ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ, ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್ ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ ಉಲ್ಲೇಖಿಸಲಾಗಿದೆ. ವರದಿಯಲ್ಲಿನ್ನ ಅಂಶಗಳನ್ನು ಸದ್ಯದ ಮಟ್ಟಿಗೆ ಗೌಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದೂ ಹೇಳಲಾಗಿದೆ. ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ನ ಮುಂದಿಡಲು ಮುಖ್ಯಮಂತ್ರಿಗಳು ಚಿಂತನೆ ಮಾಡಿದ್ದಾರೆ. ಅದಾದ ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಅವರು ಯೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.