ಚಿಕ್ಕಮಗಳೂರು : ಮುಜರಾಯಿ ಇಲಾಖೆ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. 44 ವರ್ಷದಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ನೀಡಿದ್ದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ. ಜಿಲ್ಲಾಡಳಿತದ ಈ ನಡೆ ಅಚ್ಚರಿತರಿಸಿದೆ ಎಂದು ಕನ್ನಡದ ಪೂಜಾರಿ, ಅರ್ಚಕ ಹಿರೇಮಗಳೂರು ಕಣ್ಣನ್ ಅಸಮಾಧನ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಸಾಹಿತಿಗಳಿಗೆ ಪ್ರೋತ್ಸಾಹ ನೀಡಬೇಕು. ಬಡ ಅರ್ಚಕರ ಸಂಬಳವನ್ನು ವಾಪಸ್ ಕೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸರ್ಕಾರದ ನೀಡಿರುವ ನೋಟಿಸ್ ಹಿರೇಮಗಳೂರು ಕಣ್ಣನ್ ಅವರು ಮಾಜಿ ಸಚಿವ ಸಿಟಿ ರವಿ ಅವರಿಗೆ ತಿಳಿಸಿದ್ದು ಯಾರು ಕೂಡ ಹಣ ವಾಪಸ್ ನೀಡುವುದು ಅವಶ್ಯಕತೆ ಇಲ್ಲ ಎಂದು ಸಿಟಿ ರವಿ ಹೇಳಿದ್ದಾರೆ.