ಮೈಸೂರು: ತಾಯಿ, ತಂಗಿಯನ್ನೇ ಕೆರೆಗೆ ತಳ್ಳಿ ಯುವಕ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲ್ಲೂಕು ಮರೂರು ಗ್ರಾಮದಲ್ಲಿ ನಡೆದಿದೆ. ಧನುಶ್ರೀ (19), ಅನಿತಾ (43) ಮೃತ ತಾಯಿ ಮಗಳು ಆಗಿದ್ದಾರೆ. ಮಗ ನಿತಿನ್ ಎಂಬಾತನಿಂದ ಕೃತ್ಯ ನಡೆದಿದೆ. ಅನ್ಯಕೋಮಿನ ಯುವಕನನ್ನು ಧನುಶ್ರೀ ಪ್ರೀತಿಸುತ್ತಿದ್ದಳು. ಈ ವಿಚಾರದಲ್ಲಿ ಅಣ್ಣ ತಂಗಿಯರ ನಡುವೆ ವೈ ಮನಸ್ಸು ಬೆಳೆದಿತ್ತು. ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ ನಲ್ಲಿ ಕರೆದೊಯ್ದು ಕೆರೆ ಬಳಿ ಬೈಕ್ ನಿಲ್ಲಿಸಿ ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದಾನೆ. ಮಗಳನ್ನು ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಇನ್ನು ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.