ಚಿಕ್ಕಮಗಳೂರು : ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಹನುಮ ಧ್ವಜ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆ ಧ್ವಜಸ್ಥಂಬ ನಿರ್ಮಿಸಿದ್ದೇ ರಾಮಧ್ವಜ ಹಾರಿಸಬೇಕೆಂದು. ಅವರ ಭಾವನೆ ವಿರುದ್ಧ ಸರ್ಕಾರ ನಡೆದುಕೊಳ್ಳುತ್ತಿದೆ. ಜನವರಿ 26ರಂದು ಅಲ್ಲಿ ರಾಷ್ಟ್ರಧ್ವಜ ಹಾರಿಸಿ, ಗೌರವ ಕೊಟ್ಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು ನೀಡಿದ್ದಾರೆ.