ಮೈಸೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಕೆಂಡಮಂಡಲರಾಗಿದ್ದು, ಕುಮಾರಸ್ವಾಮಿ ಬಳಿ ನಾನು ವಿನಯದ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ. ದೇವೇಗೌಡರ ಮೇಲಿನ ಗೌರವಕ್ಕಾಗಿ ಮಾತ್ರ ಸುಮ್ಮನೆ ಇದ್ದೀನಿ. ದೇವೇಗೌಡರ ಹೆಸರು ಅವರ ಜತೆ ಇಲ್ಲದೆ ಇದ್ದಿದ್ದರೆ ಅದರ ಅಪ್ಪನಂಗೆ ನಾನು ಕುಮಾರಸ್ವಾಮಿಗೆ ಉತ್ತರ ಕೊಡ್ತಿದ್ದೆ. ಚಲುವರಾಯಸ್ವಾಮಿ ಏನ್ ಕುಮಾರಸ್ವಾಮಿ ಅವರ ಮನೆ ಋಣದಲ್ಲಿ ಇದ್ದಾನ ? ನಾನೇನೂ ಅವರ ಆಸ್ತಿ ತಿಂದಿದ್ದೀನ? ಗೌರವ ಬೇಡ ಅನ್ನಲಿ. ಅವರು ಮಾತಾಡಿದ್ದಕ್ಕಿಂತ ಬೇರೆ ಥರವೇ ನಾನು ಅವರಿಗೆ ಮಾತಾಡ್ತೀನಿ. ಕುಮಾರಸ್ವಾಮಿ ಕೈಯಲ್ಲಿ ನನ್ನ ಹಣೆಬರಹ ಬರೆಯೋಕೆ ಆಗುತ್ತ? ಕುಮಾರಸ್ವಾಮಿ ಅವರ ವಿಚಾರವೇ ಪ್ರಸ್ತುತ ಅಲ್ಲ. ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಭೈರೇಗೌಡ ಇವರನ್ನು ಜೆಡಿಎಸ್ ನಿಂದ ಹೊರ ಕಳುಹಿಸಿದ್ದು ಯಾರ ಅಂತ ಕುಮಾರಸ್ವಾಮಿ ಹೇಳಲಿ. ಮಂಡ್ಯ ಇವರಿಗೆ ಕೊಟ್ಟ ಗೌರವಕ್ಕೆ ಈಗ ಅಶಾಂತಿ, ಗಲಭೆಯ ರಿಟರ್ನಸ್ ಕೊಡ್ತಿದ್ದಾರ? ಅವರಿಗ ನಾಚಿಕೆ ಆಗಬೇಕು. ಒಂದು ಅಂಗನವಾಡಿ ಕಟ್ಟಡ ಕಟ್ಟಲು ಆಗಿಲ್ಲ. ಅವರೇನೂ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೆ? ಹಿಟ್ ಅಂಡ್ ರನ್ ಕೇಸ್ ಅವರದು. ಬರೋಕೆ ಹೇಳಿ ಮಂಡ್ಯ ಗೆ ಇಲ್ಲದಿದ್ದರೆ ವಿಧಾನಸಭೆಯಲ್ಲೇ ಒಂದು ದಿನ ಮಂಡ್ಯ ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡೋಣ. ನಾನು ಸ್ಪೀಕರ್ ಸಮಯ ಕೇಳ್ತಿನಿ. ಅವರು ಕೇಳಲಿ. ಒಂದು ಇಡೀ ದಿನ ಕಲಾಪದಲ್ಲೇ ಚರ್ಚೆ ಮಾಡೋಣ. ಅವರ ಅಭಿವೃದ್ಧಿ ಜ್ಹಿರೋ. ಯಾರನ್ನೋ ಬೈಯ್ದು ಬಿಟ್ಟು ಹೋದರೆ ಇಡೀ ದಿನ ಪ್ರಚಾರದಲ್ಲಿ ಇರ್ತೀವಿ ಅಂತ ಹೀಗೆ ಮಾತಾಡ್ತಾರೆ. ಮಂಡ್ಯ ಅಭಿವೃದ್ಧಿ ಮಾಡಿದ್ದರೆ 8 ಜನ ಯಾಕೆ ಸೋತರು? ಎಂದು ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರಹಾಕಿದ್ರು.