ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆ ಆಯ್ತು ಇದೀಗ ಕರಡಿ ಕಾಟ ಶುರುವಾಗಿದೆ. ಕಾಡಾನೆ, ಚಿರತೆ ಮೊದಲಾದ ಕಾಡುಮೃಗಳು ಪದೇಪದೆ ಜಮೀನು-ತೋಟ ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗಿ ಬೆಳೆ ಹಾಳುಮಾಡುವುದರ ಜೊತೆಗೆ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡುತ್ತಿವೆ. ಆನೆ ನಂತರ ಈಗ ಕರಡಿ ಕಾಟವನ್ನೂ ಸಹಿಸಬೇಕಾದ ಸ್ಥಿತಿ ಗ್ರಾಮಸ್ಥರಿಗೆ ಎದುರಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಹೊನ್ನಾಳ ಗ್ರಾಮಗಳು ಮತ್ತು ತರೀಕೆರೆಯಲ್ಲಿ ಬಯಲುಸೀಮೆ ಗ್ರಾಮಗಳ ರೈತರು ಜೇನುಕೃಷಿ ಮಾಡುತ್ತಿರುವ ಕಾರಣ ಕರಡಿಗಳು ತೋಟಗಳಿಗೆ ನುಗ್ಗಿ ಅದನ್ನು ನಾಶಮಾಡುತ್ತಿವೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.