ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ ಸುಮಾರು 7,500 ಎಕರೆ ಅರಣ್ಯ ಭೂಮಿಯನ್ನು ಹಿಂಪಡೆಯಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನ ಅರಣ್ಯಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸುಮಾರು ಶೇ 95 ರಷ್ಟು ಭಾಗ ಅರಣ್ಯ ಭೂಮಿ ಇದೆ, ಮತ್ತು ಅವುಗಳನ್ನು ಕೆಲ ವ್ಯಕ್ತಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಅವುಗಳನ್ನು ಕಾಫಿ, ಟೀ ಮತ್ತು ರಬ್ಬರ್ ತೋಟಗಳಾಗಿ ಮಾರ್ಪಡಿಸಲಾಗಿದೆ. ಈ ಅರಣ್ಯ ಪ್ರದೇಶಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಿದೆ ಎಂದು ಅವರು ಹೇಳಿದರು.