ಕೊಡಗು ; ಅರಣ್ಯ ಇಲಾಖೆ ಹುದ್ದೆಗಳಿಗೆ ಅರಣ್ಯ ಶಾಸ್ತç ಪದವೀಧರರಿಗೆ ಶೇ. 100 ರಷ್ಟು ನೇರ ನೇಮಕಾತಿಗೆ ಅವಕಾಶ ನೀಡಬೇಕು ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು 2 ನೇ ದಿನದ ಪ್ರತಿಭಟನೆ ನಡೆಸಿದರು. ಪೊನ್ನಂಪೇಟೆ ಪಟ್ಟಣಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನ ಎದುರು ಅರ್ಧ ಗಂಟೆಗೂ ಅಧಿಕ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.